X Close
X

ರಾಮನಗರ: ಶಿಕ್ಷಕಿಗೆ ಮಾನಸಿಕ ಹಿಂಸೆ, ಕ್ಲಸ್ಟರ್ ಸಿಆರ್ ಪಿ ಕುಮಾರ್ ಅಮಾನತು


suspend-neww

ರಾಮನಗರ: ಶಿಕ್ಷಕಿಗೆ ಮಾನಸಿಕ ಹಿಂಸೆ ನೀಡಿದ ಆರೋಪದ ಮೇರೆಗೆ ರಾಮನಗರ ಟೌನ್ ಕ್ಲಸ್ಟರ್ ಸಿಆರ್ ಪಿ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಜಿಲ್ಲಾ ಉಪನಿರ್ದೇಶಕರು ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸುಕನ್ಯಾ ಶೆಟ್ಟಿ ಎಂಬ ಶಿಕ್ಷಕಿ ನೀಡಿದ ದೂರಿನ ಆಧಾರದ ಮೇರೆಗೆ ಈ ಕ್ರಮ ಜರುಗಿಸಲಾಗಿದೆ.  ಕಳೆದ ಮೂರು ವರ್ಷಗಳಿಂದ ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ ಪಾಠ ಮಾಡಲು ಬಿಡದೆ ಗಂಟೆಗಟ್ಟಲೆ ಅನಾವಶ್ಯಕವಾಗಿ ಮಾತನಾಡಿಸಿ, ವೈಯಕ್ತಿಕ ಮೊಬೈಲ್ ನಂಬರ್ ಗೆ ರಜೆ ದಿನಗಳಲ್ಲಿ ಕರೆ ಮಾಡುತ್ತಿದ್ದಾರೆ ಎಂದು ಅವರು ಎರಡು ಪುಟಗಳ ದೂರಿನಲ್ಲಿ ಆರೋಪಿಸಿದ್ದಾರೆ. 

ಶಿಕ್ಷಕಿ ನೀಡಿದ ದೂರಿನ ಆಧಾರದ ಮೇರೆಗೆ ಪ್ರಾರ್ಥಮಿಕ ತನಿಖೆ ಮಾಡಿ ವಿಚಾರಣೆ ಕಾಯ್ದಿರಿಸಿ ಸಿಆರ್ ಪಿ ಅಮಾನತು ಮಾಡಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೋಮಶೇಖರಯ್ಯ ಆದೇಶ ಮಾಡಿದ್ದಾರೆ ಎನ್ನಲಾಗಿದೆ.

(KANNADA PRABHA)